
Prajwal Revanna arrest: ಪ್ರಜ್ವಲ್ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ?
ಪ್ರಜ್ವಲ್ ರೇವಣ್ಣ ಅರೆಸ್ಟ್ ಆದ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
ಪ್ರಜ್ವಲ್ ರೇವಣ್ಣ ಅರೆಸ್ಟ್(Prajwal Revanna arrest) ಆದ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr. G. Parameshwar) ಪ್ರತಿಕ್ರಿಯೆ ನೀಡಿದ್ದು, ನಾನು ಎಸ್ಐಟಿ(SIT) ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ಅವರು ವಿಷಯವನ್ನು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್ರನ್ನು ಕಾನೂನು ಪ್ರಕಾರ ಅರೆಸ್ಟ್ ಮಾಡಿದ್ದಾರೆ. ಪ್ರಜ್ವಲ್ ತನಿಖೆಗೆ ಸಹಕಾರ ಕೊಡ್ತಿದ್ದಾರೆ. ಕೊಡಲೇಬೇಕು. ಎಸ್ಐಟಿ ಮುಂದಿನ ಕ್ರಮ ಕೈಗೊಳ್ಳುತ್ತದೆ. ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಂತ್ರಸ್ತೆಯರು ಎಸ್ಐಟಿ ಅಧಿಕಾರಿಗಳ ಬಳಿ ದೂರು ನೀಡಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಅರೆಸ್ಟ್ಗೂ ಮುನ್ನ ಏರ್ಪೋರ್ಟ್ ನಲ್ಲಿ ನಡೆದಿದ್ದೇನು..? ಎಸ್ಐಟಿ ಅಧಿಕಾರಿಗಳು ಬರುತ್ತಿದ್ದನ್ನು ಕಂಡು ಪ್ರಜ್ವಲ್ ಗರಂ!