Asianet Suvarna News Asianet Suvarna News

ಲಾಕ್‌ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್: ಬಿಬಿಎಂಪಿ ನೂತನ ಆಯುಕ್ತ ಸ್ಪಷ್ಟನೆ

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಜುಲೈ.19): ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

'ಇನ್ಮುಂದೆ ಲಾಕ್‌ಡೌನ್ ಇಲ್ಲ, ಇನ್ನೇನಿದ್ರೂ ಸೀಲ್‌ಡೌನ್ ಮಾತ್ರ' 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ನಗರದಲ್ಲಿ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಜಾರಿ  ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.