Asianet Suvarna News Asianet Suvarna News

ಟ್ರಾಕ್ಟರ್ ಹೆಡ್‌ಲೈಟ್ ಬೆಳಕಿನಲ್ಲಿಯೇ ನವಜೋಡಿಯ ಎಂಗೇಜ್ಮೆಂಟ್!

ಯಾದಗಿರಿ(ನ.25): ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದಲ್ಲಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ನವಜೋಡಿಯೊಂದು ಎಂಗೇಜ್ಮೆಂಟ್ ಮಾಡಿಕೊಂಡಿದೆ. ಮಾದ್ಯಾಮ ಹಾಗೂ ಸೋಮಣ್ಣ ಜೋಡಿ ನಿಶ್ಚಿತಾರ್ಥ ಕಾರ್ಯಕ್ರಮ ವಿದ್ಯುತ್ ಬೆಳಕು ಇಲ್ಲವೇ ಸೋಲಾರ್ ಬೆಳಕಿನಲ್ಲಿ ನಡೆಸಬೇಕಾಗಿತ್ತು. ಆದರೆ ,ಕೃಷ್ಣಾ ನದಿ ಪ್ರವಾಹಕ್ಕೆ ವಿದ್ಯುತ್ ಕಂಬಗಳು ಹಾನಿಯಾದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಡ್ಡಿ ಜನರು ಕಗ್ಗತ್ತಲಿನಲ್ಲಿಯೇ ಕಾಲ ಕಳೆಯುವಂತಾಗಿದೆ. ಹೀಗಾಗಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಆದರೆ, ಅಧಿಕಾರಿಗಳು ಮಾತ್ರ ಈ ಗ್ರಾಮಕ್ಕೆ ಯಾವಾಗ ವಿದ್ಯುತ್ ಕಂಬಗಳನ್ನ ಹಾಕುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಯಾದಗಿರಿ(ನ.25): ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮದಲ್ಲಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ನವಜೋಡಿಯೊಂದು ಎಂಗೇಜ್ಮೆಂಟ್ ಮಾಡಿಕೊಂಡಿದೆ. ಮಾದ್ಯಾಮ ಹಾಗೂ ಸೋಮಣ್ಣ ಜೋಡಿ ನಿಶ್ಚಿತಾರ್ಥ ಕಾರ್ಯಕ್ರಮ ವಿದ್ಯುತ್ ಬೆಳಕು ಇಲ್ಲವೇ ಸೋಲಾರ್ ಬೆಳಕಿನಲ್ಲಿ ನಡೆಸಬೇಕಾಗಿತ್ತು. ಆದರೆ ,ಕೃಷ್ಣಾ ನದಿ ಪ್ರವಾಹಕ್ಕೆ ವಿದ್ಯುತ್ ಕಂಬಗಳು ಹಾನಿಯಾದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಡ್ಡಿ ಜನರು ಕಗ್ಗತ್ತಲಿನಲ್ಲಿಯೇ ಕಾಲ ಕಳೆಯುವಂತಾಗಿದೆ. ಹೀಗಾಗಿ ಟ್ರಾಕ್ಟರ್ ಹೆಡ್ ಲೈಟ್ ಬೆಳಕಿನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ.