
ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ: ಜಾರಕಿಹೊಳಿ ಪ್ರತಿಕ್ರಿಯೆ
ಕುರುಬರ ಎಸ್ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ| ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ: ಸತೀಶ ಜಾರಕಿಹೊಳಿ|
ದಾವಣಗೆರೆ(ಫೆ.09): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 'ಹಿಂದ' ಹೋರಾಟ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಕುರುಬರ ಎಸ್ಟಿ ಹೋರಾಟವೇ ಬೇರೆ, ಸಿದ್ದರಾಮಯ್ಯ ಅವರ 'ಅಹಿಂದ' ಹೋರಾಟವೇ ಬೇರೆ ಎಂದು ಹೇಳಿದ್ದಾರೆ.
Add Asianetnews Kannada as a Preferred Source

ಮೀಸಲಾತಿ ಕಗ್ಗಂಟಿನಿಂದ ಪಾರಾಗ್ತಾರಾ ಸಿಎಂ ಬಿಎಸ್ವೈ?
ಇಂದು(ಮಂಗಳವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಗಾಗಲೇ ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟದ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.