Asianet Suvarna News Asianet Suvarna News

ವಿದ್ಯಾರ್ಥಿನಿಯರಿಗೆ ಕಾಮುಕ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಗ್ರಾಮಸ್ಥರಿಂದ ಸಖತ್ ಕ್ಲಾಸ್!

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ| ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಕದರಾಪುರ ಶಾಲೆಯಲ್ಲಿ ನಡೆದ ಘಟನೆ| ಗ್ರಾಮಸ್ಥರಿಂದ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಕ್ಲಾಸ್| ಶಿಕ್ಷಕ ಬಾಲರಾಜ್ ನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳದ ಆರೋಪ| ಕೈಮುಗಿದು ತಪ್ಪಾಗಿದೆ ಕ್ಷಮಿಸಿ ಎಂದ ಕಾಮುಕ  ಶಿಕ್ಷಕ|
 

ಯಾದಗಿರಿ[ಜ. 31]: ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಕದರಾಪುರ ಶಾಲೆಯಲ್ಲಿ ನಡೆದಿದೆ. ಶಾಲೆಯ ಶಿಕ್ಷಕ ಬಾಲರಾಜ್ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಹೀಗಾಗಿ ಗ್ರಾಮಸ್ಥರೆಲ್ಲ ಸೇರಿಕೊಂಡು ಶಿಕ್ಷಕ ಬಾಲರಾಜ್ ನಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.  

ಶಿಕ್ಷಕ ಬಾಲರಾಜ್ ವಿದ್ಯಾರ್ಥಿನಿಯರಿಗೆ ಪ್ರತಿ ದಿನ ಲೈಂಗಿ ಕಿರುಕುಳ ನೀಡತ್ತಿದ್ದ ಎಂದು ಆರೋಪಿಸಲಾಗಿದೆ. ಶಿಕ್ಷಕನ ಉಪಟಳಕ್ಕೆ ಬೇಸತ್ತ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರೆ. ಈ ವೇಳೆ ಶಿಕ್ಷಕ ಬಾಲರಾಜ್ ಕೈ ಮುಗಿದು ತಪ್ಪಾಗಿದೆ ಕ್ಷಮಿಸಿ ಅಂತಾ ಕೇಳಿಕೊಂಡಿದ್ದಾನೆ. ಈ ಕೂಡಲೇ ಸಂಬಂಧ ಅಧಿಕಾರಿಗಳು ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. 

Video Top Stories