Asianet Suvarna News Asianet Suvarna News

ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಜೂ. 17): ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ

ಕೊರೋನಾದಿಂದ ನೆಲಕಚ್ಚಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ

ಕೋವಿಡ್ 19 ಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು ಅಂತ್ಯ ಸಂಸ್ಕಾರ ಮಾಡಿ ವಾಪಸಾಗುವಾಗ ಈ ಘಟನೆ ನಡೆದಿದೆ. ಕೊರೊನಾಗೆ ಬಲಿಯಾದ ವ್ಯಕ್ತಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು ಅಲ್ಲಿಯೇ ಮೃತಪಟ್ಟಿದ್ದರು. ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಮಧ್ಯರಾತ್ರಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ವಾಪಸ್ ಹೋಗುವಾಗ ಪಿಪಿಇ ಕಿಟ್‌ನ್ನು ಉಚ್ಚಾ ಗ್ರಾಮದ ಬಳಿ ಬಿಸಾಡಿ ಹೋಗಿದ್ದಾರೆ. 

Video Top Stories