Asianet Suvarna News Asianet Suvarna News

ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ: ಸಂಕಷ್ಟದಲ್ಲಿ ಜನತೆ

ರಾಯಚೂರು, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನುಗ್ಗಿದ ನೀರು| ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಐತಿಹಾಸಿಕ ಕೋಟೆಯೇ ಜಲಾವೃತ| ಸತತ ಮಳೆಗೆ ಕುಸಿದ ಮನೆಗಳು| 

ಬಾಗಲಕೋಟೆ(ಸೆ.27): ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭೀಕರ ಮಳೆಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಐತಿಹಾಸಿಕ ಬಾದಾಮಿ ಕೋಟೆಯೇ ಜಲಾವೃತವವಾಗಿದೆ. 

ಯಾದಗಿರಿ: ಭಾರೀ ಮಳೆ, ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ರಾಯಚೂರು, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವು ಮನೆಗಳೂ ಕೊಡ ಬಿದ್ದಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಸೇತುವೆ ಜಲಾವೃತವಾಗಿದೆ. 
 

Video Top Stories