ಕಾರವಾರ: ಅರಗ ಹೆದ್ದಾರಿಯಲ್ಲಿ ಕೃತಕ ನೆರೆ, ಮನೆಗಳೊಳಗೆ ಕೆರೆ!

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

Share this Video
  • FB
  • Linkdin
  • Whatsapp

ಕಾರವಾರ (Karwar) ಅರಗದ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಕೃತಕ ನೆರೆ! ನೀರು ಹರಿಯುವ ಜಾಗದಲ್ಲಿ ನೆಟ್ ಅಳವಡಿಸಿದ್ದರಿಂದ, ನೆಟ್‌ನಲ್ಲಿ ಕಸ ಸಿಲುಕಿ ನೀರು ಹರಿದು ಹೋಗಲು ಸಾಧ್ಯವಾಗದೇ, ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ 4 ದಿನ ಕಳೆದರೂ ಪತ್ತೆಯಾಗದ ಬಾಲಕಿ ದೇಹ

ಕಾರವಾರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಉಳಿದೆಡೆ ಮಳೆ ಇಳಿಮುಖವಾಗಿದೆ. ಗಂಗಾವಳಿ ನದಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಬೋಟ್‌ನಿಂದ ಐವರನ್ನು ರಕ್ಷಿಸಲಾಗಿದೆ.

ಯಲ್ಲಾಪುರದಲ್ಲಿ ಭಾರಿ ಮಳೆಗೆ ಶಾಲಾ ಆವರಣ ಗೋಡೆ ಕುಸಿದಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಲ್ಲಿ ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟಏರಲಿದೆ. ಕಾರವಾರ, ಅಂಕೋಲಾದಲ್ಲಿ ಅಪಾಯದ ಮಟ್ಟದಲ್ಲಿದ್ದ ನದಿಗಳಲ್ಲಿ ನೀರು ಕಡಿಮೆಯಾಗಿದೆ. ಜಲಾವೃತವಾಗಿದ್ದ ಪ್ರದೇಶದಲ್ಲಿ ನೀರು ಇಳಿದಿದೆ. ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಸುರಕ್ಷತಾ ದೃಷ್ಟಿಯಿಂದ ಗುರುವಾರವೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

Related Video