Karnataka Hijab Row: ಸಮವಸ್ತ್ರ ಸಂಘರ್ಷಕ್ಕೆ ಬ್ರೇಕ್‌ ಹಾಕಲು ಗೃಹ ಇಲಾಖೆ ಸಜ್ಜು!

*ರಾಜ್ಯದಲ್ಲಿ ಹಿಂಸೆಗೆ ತಿರುಗಿದ ಹಿಜಾಬ್‌-ಕೇಸರಿ ಶಾಲು ವಿವಾದ
*ಪೊಲೀಸರಿಂದ ಕಾಲೇಜಲ್ಲಿ ಲಾಠಿ ಚಾಜ್‌ರ್‍, ಅಶ್ರುವಾಯು ಪ್ರಯೋಗ
*ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಚರ್ಚೆ
*ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚನೆ

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 09): ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್‌-ಕೇಸರಿ ಶಾಲು ಸಂಘರ್ಷ(Hijab Row) ಇದೀಗ ಹಿಂಸೆಗೆ ತಿರುಗಿದೆ. ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು, ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಹಿಂಸಾಚಾರ (violence) ನಡೆದಿದೆ. ವಿದ್ಯಾರ್ಥಿಗಳು ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದಾರೆ. ಈ ಬೆನ್ನಲ್ಲೇ ಗ್ರಹ, ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ , ಶಿಕ್ಷಣ ಸಚಿವ ಬಿ ಸಿ ನಾಗೇಶ್‌, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಾಣ ನೇತೃತ್ವದಲ್ಲಿ ಸಭೆ ನಡಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ವಿವಾದದ ಬಗ್ಗೆ ಚರ್ಚಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಕೋರ್ಟ್‌ ತೀರ್ಪು ಏನೇ ಬಂದರೂ ಅದನ್ನು ಪಾಲಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದಲ್ಲಿ ಹೊತ್ತಿದ ಹಿಜಾಬ್ ಬೆಂಕಿ, 18 ಜಿಲ್ಲೆಗಳ 54 ಕಾಲೇಜಲ್ಲಿ ಪ್ರತಿಭಟನೆ!

ಇನ್ನು ಹಿಜಾಬ್‌-ಕೇಸರಿ ಶಾಲು ವಿವಾದದ ಕಿಡಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ 1ರಿಂದ 8ನೇ ತರಗತಿಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಎಲ್ಲಾ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಿ ಆದೇಶಿಸಿದೆ. ಅದರಂತೆ ಫೆ.9ರ ಬುಧವಾರದಿಂದ ಫೆ.11ರ ಶುಕ್ರವಾರದ ವರೆಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ 9ನೇ ತರಗತಿ ಮತ್ತು ಅದರ ಮೇಲ್ಮಟ್ಟದ ಎಲ್ಲಾ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಚಟುವಟಿಕೆಗಳು ಬಂದ್‌ ಆಗಲಿವೆ

Related Video