ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

 ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು (ಏ. 20): ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ:ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಇನ್ನು ಈ ಬೆನ್ನಲ್ಲೆ ಮಾತನಾಡಿರುವ ಮುಸ್ಲಿಂ ಮುಖಂಡ ರಿಯಾಜ್‌ ಅಹ್ಮದ್‌ " ಮಸೀದಿಗಳಲ್ಲಿ ಯಾವುದೇ ರೀತಿ ಪ್ರಚೋದನೆ ನೀಡೋದಿಲ್ಲ, ದ್ವೇಷ ಭಾಷಣ ಮಾಡುವ ಕಾರ್ಯ ನಡೆಯೋದಿಲ್ಲ, ಗಡ್ಡ ಬಿಟ್ಟವರೆಲ್ಲ ಮೌಲ್ವಿಯಾಗಲು ಸಾಧ್ಯವಿಲ್ಲ. ನಮ್ಮ ಮದರಸಾಗಳಲ್ಲಿ, ಮಸೀದಿಗಳಲ್ಲಿ ಇನ್ನೊಬ್ಬರನ್ನು ಗೌರವಿಸಲು ಕಲಿಸಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾತನಾಡಿದವರು ಯಾರೋ ವೇಷಧಾರಿಯಾಗಿದ್ದಾರೆ, ಹೊರತು ಮೌಲ್ವಿ ಅಲ್ಲ " ಎಂದು ಹೇಳಿದ್ದಾರೆ. 

Related Video