Asianet Suvarna News Asianet Suvarna News

ಮಸೀದಿಗಳಿಗೆ ಬೆದರಿಕೆ ಪತ್ರ: ಪೊಲೀಸ್‌ ಇಲಾಖೆಯಿಂದ ತನಿಖೆಗೆ ಆದೇಶ

ಕಿಡಿಗೇಡಿಗಳಿಂದ ಮಸೀದಿಗಳಿಗೆ ಬೆದರಿಕೆ ಪತ್ರ| ತನಿಖೆಗೆ ಆದೇಶಿಸಿದ ಬಳ್ಳಾರಿ ಐಜಿ| ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸ್‌ ಇಲಾಖೆ| ರಾಯಚೂರು ಎಸ್‌ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ|

ಬಳ್ಳಾರಿ(ಜ. ­19): ಕಿಡಿಗೇಡಿಗಳಿಂದ ಮಸೀದಿಗಳಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ ತನಿಖೆಗೆ ಆದೇಶಿಸಿದೆ. ರಾಯಚೂರು ಎಸ್‌ಪಿ ನೇತೃತ್ವದಲ್ಲಿ ತನಿಖೆಗೆ ಬಳ್ಳಾರಿ ಐಜಿ ಅವರು ತನಿಖೆಗೆ ಆದೇಶಿಸಿದ್ದಾರೆ. 

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಶಾಸಕರಾದ ಸೋಮಸೇಖರ ರೆಡ್ಡಿ, ಆನಂದ ಸಿಂಗ್ ಹೆಸರಿನಲ್ಲಿ ರಾಜ್ಯ ಕಾರವಾರ, ರಾಯಚೂರು, ಬಾಗಲಕೋಟೆ, ಕಲಬುರಗಿ, ಭಟ್ಕಳದ ಮಸೀದಿಗಳಿಗೆ ಬೆದರಿಕೆ ಪತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸೋಮಸೇಖರ ರೆಡ್ಡಿ ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 
 

Video Top Stories