ಮಲೆಮಹದೇಶ್ವರ ಬೆಟ್ಟದಲ್ಲಿ 'ಕೇಸರಿ' ರಣಕಹಳೆ: ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರು
ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ರಥಯಾತ್ರೆ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿಕ ಜೆ.ಪಿ ನಡ್ಡಾ ರಣಕಹಳೆ ಮೊಳಗಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ ನಿಶ್ಚಿತವಾಗಿ ಜಯ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಗಾರಿ ಬಾರಿಸುವ ಮೂಲಕ ಬಿಜೆಪಿ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ. ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಹಾಗೂ ಕೆ.ಎಸ್. ಈಶ್ವರಪ್ಪ ಉಪಸ್ಥಿತಿ ಇದ್ದರು.