Asianet Suvarna News Asianet Suvarna News

ನನ್ನ ವೋಟು ನನ್ನ ಮಾತು: ಶಿಗ್ಗಾಂವಿ ರಣಕಣದಲ್ಲಿ ಕ್ಷೇತ್ರದ ಮತದಾರರು ಹೇಳೋದೇನು.?

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಶಿಗ್ಗಾವಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಶಿಗ್ಗಾವಿ   ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲಾವನ್ನೂ ಕೂತು ಗಮನಿಸುತ್ತಿದ್ದು, ಶಿಗ್ಗಾವಿಯಲ್ಲಿ ಬಿಜೆಪಿ ಬರುತ್ತೆ ಎಂದಿದ್ದಾರೆ. ಏಷ್ಯಾನೆಟ್ ಸುವರ್ಣ ಜತೆ ಮಾತನಾಡಿದ್ದು ಬೊಮ್ಮಾಯಿ ಶಿಗ್ಗಾವಿಯಲ್ಲಿ ಬರುತ್ತಾರೆ ನಾಲ್ಕನೇ ಬಾರಿ ಗೆಲ್ಲುತ್ತಾರೆ ಎಂದಿದ್ದಾರೆ. ಇನ್ನು ಕಾಂಗ್ರೆಸ್‌ ನಿಂದ ವಿನಯ್ ಕುಲಕರ್ಣಿ ಬರುತ್ತಾರೆ ಎಂದು ಹೇಳಲಾಗುತ್ತಿದೆ ಆದರೆ  ವಿನಯ್ ಕುಲಕರ್ಣಿ  ತೋರಿಸಲು ಯಾವುದೇ ಕೆಲಸವನ್ನು ಇಲ್ಲಿ ಮಾಡಿಲ್ಲ ಎಂದು ಅಭಿಪ್ರಾಯ ತಿಳಿಸಿದ್ದಾರೆ .