
ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ: ಎಂದಿನಂತೆ ಬಸ್'ಗಳ ಸಂಚಾರ
ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ ನಡೆಯುತ್ತಿದ್ದು, ಬಸ್ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ತಿಳಿದು ಬಂದಿದೆ.
ಇಂದಿನಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ನಡೆಯುತ್ತಿದೆ. ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಂದ್'ಗೆ ಬಾಹ್ಯ ಬೆಂಬಲ ನೀಡಿದ್ದು, ಬಸ್ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ. ಎಂದಿನಂತೆ BMTC ಹಾಗೂ KSRTC ಬಸ್'ಗಳು ಸಂಚರಿಸಲಿವೆ. ಮೆಜೆಸ್ಟಿಕ್ನಲ್ಲಿ ಎಂದಿನಂತೆ ಬಸ್ಗಳ ಸಂಚಾರ ಆರಂಭ ಆಗಿದ್ದು, ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ಸರ್ಕಾರಿ ನೌಕರರ ಮುಷ್ಕರಕ್ಕೆ 42 ಸರ್ಕಾರಿ ಇಲಾಖೆಗಳು ಸಾಥ್ ನೀಡಿದ್ದು, ಬಿಬಿಎಂಪಿಯ ಎಲ್ಲಾ ಕಚೇರಿಗಳು ಇಂದು ಮುಷ್ಕರದಲ್ಲಿ ಭಾಗಿ ಆಗಲಿವೆ.
Add Asianetnews Kannada as a Preferred Source
