
ಸರ್ಕಾರದ ಕೈ ಸೇರಲಿದೆಯಾ ಮುರುಘಾ ಮಠ: ಸಿಎಂ ಬೊಮ್ಮಾಯಿ ಅಂತಿಮ ನಿರ್ಧಾರ
ಮುರುಘಾ ಮಠದ ಶ್ರೀಗಳು ಜೈಲು ಸೇರಿದ ಬಳಿಕ ಅನೇಕ ಬೆಳವಣಿಗೆಗಳು ನಡೆದಿದ್ದು, ಈ ಕುರಿತಾದ ವರದಿ ರಾಜ್ಯ ಸರ್ಕಾರದ ಕೈ ಸೇರಲಿದೆ.
ಚಿತ್ರದುರ್ಗ(ನ16):ಮುರುಘಾ ಮಠದ ಆಡಳಿತದ ಭವಿಷ್ಯ ಇದೀಗ ರಾಜ್ಯ ಸರ್ಕಾರ ನಿರ್ಧರಿಸಲಿದ್ದು, ಮಠವನ್ನು ಸರ್ಕಾರ ವಶಕ್ಕೆ ಪಡೆಯತ್ತಾ ಎಂಬ ಚರ್ಚೆ ಶುರುವಾಗಿದೆ. ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಚಿತ್ರದುರ್ಗ ಡಿಸಿ ದಿವ್ಯ ಪ್ರಭು ಅವರಿಂದ ಕಂದಾಯ ಇಲಾಖೆಗೆ ವರದಿ ಸಲ್ಲಿಕೆಯಾಗಿದ್ದು, ಇಂದು ಸಂಜೆ ಕಂದಾಯು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಮಠದ ಆಡಳಿತಾಧಿಕಾರಿ ನೇಮಕಾತಿಯ ಬಗ್ಗೆ ಡಿಸಿ ವರದಿ ಪರಿಶೀಲಿಸಿ ಅಂತಿಮ ನಿರ್ಧಾರವನ್ನು ಸಿಎಂ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Assembly Election: ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಿಲ್ಲ- ಸಿದ್ದರಾಮಯ್ಯ