Asianet Suvarna News Asianet Suvarna News

Siddeshwara Swamiji: ಶತಮಾನದ ಮಹಾಸಂತ ಇನ್ನಿಲ್ಲ: ಕಂಬನಿ ಮಿಡಿದ ಕೋಟ್ಯಂತರ ಭಕ್ತರು

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಹಾಗೂ ಶತಮಾನದ ಮಹಾಸಂತ ಸಿದ್ದೇಶ್ವರ ಸ್ವಾಮಿ ವಿಧಿವಶರಾಗಿದ್ದಾರೆ.
 

First Published Jan 3, 2023, 10:28 AM IST | Last Updated Jan 3, 2023, 10:28 AM IST

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಕೋಟ್ಯಂತರ ಭಕ್ತರನ್ನು ಬಿಟ್ಟು ಅಗಲಿದ್ದಾರೆ.‌ ಸೈನಿಕ ಶಾಲೆಯಲ್ಲಿ ಸಿದ್ದೇಶ್ವರ ಶ್ರೀಗಳ ಪಾರ್ಥಿವ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ದರ್ಶನಕ್ಕೆ ಲಕ್ಷಾಂತರ ಭಕ್ತರು ಹರಿದು ಬರುತ್ತಿದ್ದು, ವಿಜಯಪುರ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಸೈನಿಕ ಶಾಲೆಯ ಆವರಣದ ಬಳಿ ಭಕ್ತರು ಜಮಾಯಿಸಿದ್ದು, ಮಧ್ಯಾಹ್ನ ಮೂರು ಗಂಟೆಯವರೆಗೆ ಶ್ರೀಗಳ ದರ್ಶನಕ್ಕೆ ಅವಕಾಶ ನೀಡಲಾಗಿದೆ.