
ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು
ಕಾರವಾರದಲ್ಲಿ ಮುಂದುವರಿದ ಮೀನುಗಾರರ ಪ್ರತಿಭಟನೆ/ ಸ್ಥಳೀಯ ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಚಪ್ಪಲಿ ಏಟು/ ಸಾಗರಮಾಲಾ ಪ್ರಾಜೆಕ್ಟ್ ಗೆ ಮೀನುಗಾರರ ವಿರೋಧ/ ವಾಣಿಜ್ಯ ಬಂದರು ವಿಸ್ತರಣೆ ಮಾಡಬೇಡಿ
ಕಾರವಾರ(ಜ.14) ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.