'ಕ್ರಿಮಿನಲ್ ಕೇಸ್ ಹಾಕಿ ಈಶ್ವರಪ್ಪರನ್ನು ಕೂಡಲೇ ವಜಾ ಮಾಡಿ' ಡಿಕೆಶಿ ಗುಡುಗು
ಕಾಶಿ ಮತ್ತು ಮಥುರಾದಲ್ಲಿ ಮಂದಿರ/ ಕೆಎಸ್ ಈಶ್ವರಪ್ಪ ಹೇಳಿಕೆಗೆ ಡಿಕೆಶಿ ಕೆಂಡ/ ಈಶ್ವರಪ್ಪ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು/ ಸಿಎಂ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು
ಬೆಂಗಳೂರು(ಆ. 06) ಕಾಶಿ ಮತ್ತು ಮಥುರಾದಲ್ಲಿಯೂ ಮಸೀದಿ ನೆಲೆಸಮ ಮಾಡಿ ಮಂದಿರ ನಿರ್ಮಾಣ ಆಗುತ್ತದೆ ಎಂದ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
ಅಯೋಧ್ಯೆ ನಂತರ ಕಾಶಿ, ಮಥುರಾ ಬಾಕಿ? ಕೂಗಿಗೆ ಕಾರಣ ಏನು?
ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡುವ ಕೆಎಸ್ ಈಶ್ವರಪ್ಪ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಿಎಂ ಯಡಿಯೂರಪ್ಪ ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.