KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದು, ಮಾರ್ಚ್‌ 1ರಿಂದ ಮತ್ತೆ ಸಾರಿಗೆ ಸಂಪೂರ್ಣ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

Share this Video
  • FB
  • Linkdin
  • Whatsapp

7ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೊಮ್ಮೆ ಪ್ರತಿಭಟನೆ ನಡೆಸಲು ತಯಾರಾಗಿದ್ದು, ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಬಾರಿ ಕುಟುಂಬ ಸಮೇತ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. 7ನೇ ವೇತನ ಆಯೋಗ ನೀಡುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ, ಬಜೆಟ್‌'ನಲ್ಲಿ ಸಾರಿಗೆ ಸಿಬ್ಬಂದಿಯನ್ನು ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video