ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

Share this Video
  • FB
  • Linkdin
  • Whatsapp

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

Add Asianetnews Kannada as a Preferred SourcegooglePreferred

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

Related Video