Asianet Suvarna News Asianet Suvarna News

Mailaralingeshwara Prediction: ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ? ಮೈಲಾರಲಿಂಗೇಶ್ವರ ಕಾರ್ಣಿಕ ಹೇಳಿದ್ದೇನು?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದಲ್ಲಿ ಹೇಳಲಾಗಿದೆ.

ಈ ಬಾರಿಯ ಲೋಕಸಭಾ(Lok Sabha) ಚುನಾವಣೆಯಲ್ಲಿ ಮತ್ತೆ ಬಿಜೆಪಿ(BJP) ಅಧಿಕಾರಕ್ಕೆ ಬರಲಿದೆ ಎಂದು ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ(Mailaralingeshwara Swamy) ಕಾರ್ಣಿಕದಲ್ಲಿ ಹೇಳಲಾಗಿದೆ. ಈ ಭಾರಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ. ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಗ್ ಎಂದು ಕಾರ್ಣಿಕ ನುಡಿಯಲಾಗಿದೆ. ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ನುಡಿದ ಕಾರ್ಣಿಕ( Karnika) ಇದಾಗಿದೆ. ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಪಕ್ಷ ಅರಳುವುದು ಕಾರ್ಣಿಕ ನುಡಿಯಿಂದ ಕೇಳಿ ಬಂದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜಿಗಣಿಹಳ್ಳಿಯಲ್ಲಿ ಈ ಕಾರ್ಣಿಕ ನಡೆದಿದೆ.

ಇದನ್ನೂ ವೀಕ್ಷಿಸಿ:  Bengaluru: ಬೆಂಗಳೂರಿಗರೇ ಎಚ್ಚರ..! ಸಿಲಿಕಾನ್‌ಸಿಟಿಗೆ ಕಾವೇರಿ ಜಲಾಘಾತ..! ನಾಳೆ, ನಾಡಿದ್ದು ಕುಡಿಯಲು ನೀರು ಸಿಗಲ್ಲ..!

Video Top Stories