Mandya Rape and Murder; ಮೃತ ಬಾಲಕಿ ಮನೆಗೆ ಸಂಸದೆ ಸುಮಲತಾ ಭೇಟಿ

ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಮಂಡ್ಯ (ಅ.16): ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಸಾಂತ್ವಾನದ ವೇಳೆ ಬಾಲಕಿಯ ತಾಯಿ ತಬ್ಬಿ ಕಣ್ಣೀರಿಟ್ಟ ಸುಮಲತಾ. ಈ ಘಟನೆ ನಡೆಯಬಾರದಿತ್ತು. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ‌. ಅವನಿಗೆ ಗಲ್ಲು ಶಿಕ್ಚೆಯೇ ಆಗಬೇಕು. ನಾನು ಸಿಎಂ ಜೊತೆ ಮಾತನಾಡಿದ್ದೇನೆ. 10 ಲಕ್ಷ ಪರಿಹಾರ ನೀಡಿದ್ದಾರೆ. ಹೋದ ಮಗಳನ್ನು ನಾವು ಕೊಡಲು ಸಾಧ್ಯ ಇಲ್ಲ ಎಂದು ಕಣ್ಣೀರಿಟ್ಟ ಸುಮಲತಾ.

Add Asianetnews Kannada as a Preferred SourcegooglePreferred

ಮಳವಳ್ಳಿ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಯಿಂದ 10 ಲಕ್ಷ ಪರಿಹಾರ ಘೋಷಣೆ

ಸುಮಲತಾ ಮುಂದೆ ಕಣ್ಣಿರಿಡುತ್ತಾ ಅಳಲು ತೋಡಿಕೊಂಡ ಕುಟುಂಬಸ್ಥರು. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ. ಈ ವೇಳೆ ಸಂಸತ್ ನಲ್ಲಿ ಧನಿ ಎತ್ತುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯ ಕೇಳಿ ಬರುತ್ತಿದೆ.

Related Video