Asianet Suvarna News Asianet Suvarna News

ತುಮಕೂರಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಗಾನ ಬಜಾನ

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು, ತುಮಕೂರಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಾಡು ಹಾಡಿ ರಂಜಿಸಿದ್ದಾರೆ.
 

ತುಮಕೂರು; ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್, ದಾರಿ ಮಧ್ಯೆ ತುಮಕೂರು ನಗರದ ಹನುಮಂತಪುರದಲ್ಲಿರುವ ಕೊಲ್ಲಾಪುರದಮ್ಮ ದೇವಸ್ಥಾನಕ್ಕೆ ದಿಢೀರ್‌ ಭೇಟಿ ಕೊಟ್ಟಿದ್ದಾರೆ. ದೇವಸ್ಥಾನದ ದೀಪಾಲಂಕಾರ, ಲಕ್ಷ ದೀಪೋತ್ಸವ ಕಂಡು ಮನಸೋತಿದ್ದಾರೆ. ಈ ವೇಳೆ ಪುನೀತ್ ರಾಜ್ ಕುಮಾರ್ ಅವರ ಗೊಂಬೆ ಹೇಳುತೈತೆ ಹಾಗೂ ಟಗರು ಬಂತು ಟಗರು ಹಾಡು ಹಾಡಿ ರಂಜಿಸಿದ್ದಾರೆ ಕಮಿಷನರ್. ಅವರ ಹಾಡಿಗೆ ಶಿಳ್ಳೆ-ಕೇಕೆ ಹಾಕಿ ಜನರು ಸಂಭ್ರಮಿಸಿದ್ದು, ಜೊತೆಗೆ ಅವರು ಅನ್ನದಾನದಲ್ಲಿ ಪಾಲ್ಗೊಂಡು ಸರತಿಯಲ್ಲಿ ಕುಂತು ಪ್ರಸಾದ ಸ್ವೀಕರಿಸಿ ಸರಳತೆ ಮೆರೆದಿದ್ದಾರೆ.

ಬೆಂಗಳೂರು ನಗರದ ಇತಿಹಾಸಕ್ಕೆ ಮೆರಗು ನೀಡಿದ ವಿ.ವಿ.ಪುರಂ ಹಬ್ಬ