Asianet Suvarna News Asianet Suvarna News

ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಕೊರೋನಾ ತಪಾಸಣೆ ವ್ಯವಸ್ಥೆ ಪರಿಶೀಲಿಸಿದ ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು (ಮಂಗಳವಾರ] ದಿಢೀರ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿದೇಶಗಳಿಂದ ಬಂದವರ ತಪಾಸಣೆಯನ್ನ ಹೇಗೆ ಮಾಡಲಾಗುತ್ತಿದೆ ಅನ್ನೋದನ್ನ ಖುದ್ದು ಪರಿಶೀಲಿಸಿದರು.

ಬೆಂಗಳೂರು, [ಮಾ.17]: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು (ಮಂಗಳವಾರ] ದಿಢೀರ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿದೇಶಗಳಿಂದ ಬಂದವರ ತಪಾಸಣೆಯನ್ನ ಹೇಗೆ ಮಾಡಲಾಗುತ್ತಿದೆ ಅನ್ನೋದನ್ನ ಖುದ್ದು ಪರಿಶೀಲಿಸಿದರು.

ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್: ರಾಜ್ಯ ಆರೋಗ್ಯ ಇಲಾಖೆ ವರದಿಯಂತೆ 11ಕ್ಕೆ ಏರಿಕೆ

ಈ ವೇಳೆ ಸಚಿವ ಡಾ.ಕೆ.ಸುಧಾಕರ್, ಏರ್​ಪೋರ್ಟ್​ನಲ್ಲಿ ಇಲ್ಲಿಯವರೆಗೂ ಕೊರೊನಾ ಸೋಂಕಿಗೆ ಎಷ್ಟು ಜನರನ್ನ ಪರಿಶೀಲನೆ ನಡೆಸಲಾಗಿದೆ? ಎಷ್ಟು ಶಂಕಿತರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
 

Video Top Stories