ಹಾಸನದಲ್ಲಿ ಗೋಲಿಬಾರ್ ಆದ್ರೆ ಡಿಸಿ ಹೊಣೆಯಂತೆ: ರೇವಣ್ಣ ಸಾಹೇಬ್ರ ಇದೆಂಥಾ ಹೇಳಿಕೆ?
ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ವಿರುದ್ಧ ಲೋಕೋಪಯೋಗ ಸಚಿವ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮೇಲೆ ರೇಗಾಡಿದ್ದಾರೆ. ಬರ ನಿರ್ವಹಣೆ ವಿಚಾರದಲ್ಲಿ ಗಲಾಟೆಯಾಗಿ ಗೋಲಿಬಾರ್ ನಡೆದರೆ ಜಿಲ್ಲಾಧಿಕಾರಿಯವರೇ ನೇರ ಹೊಣೆ ಎಂದು ರೇವಣ್ಣ ಹೇಳಿರುವುದು ಅಚ್ಚರಿ ಮೂಡಿಸಿದೆ..ಆಲೂಗಡ್ಡೆ ಬಿತ್ತನೆ ಬೀಜ ವಿಷಯದಲ್ಲಿ ಓರ್ವ ಜವಾಬ್ದಾರಿಯುತ ಸಚಿವರಗಿ ಈ ರೀತಿ ಹೇಳಿಕೆ ನೀಡಿರುವುದು ಎಷ್ಟು ಸರಿ..?