ಡಿಜಿಟಲ್ ಯುಗವನ್ನು ಯುವ ಭಾರತ ಮುನ್ನಡೆಸಿದೆ: ರಾಜೀವ್ ಚಂದ್ರಶೇಖರ್
ನವ ಭಾರತಕ್ಕಾಗಿ ಯುವ ಭಾರತ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ನವ ಭಾರತಕ್ಕಾಗಿ ಯುವ ಭಾರತ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಸಹಯೋಗದಲ್ಲಿ ನವ ಭಾರತಕ್ಕಾಗಿ ಯುವ ಭಾರತ ಕಾರ್ಯಕ್ರಮ ಆಯೋಜಿಸಲಾಗಿದ್ದು,1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿಶ್ವದ ದೊಡ್ಡ ದೊಡ್ಡ ಕಂಪನಿಗಳೇ ಭಾರತದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದೆ, ಡಿಜಿಟಲ್ ಯುವ ಭಾರತವನ್ನು ಮುನ್ನೆಡಸಿದೆ. ಮೋದಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ ಎಂದು ಹೇಳಿದ್ದಾರೆ.