Asianet Suvarna News Asianet Suvarna News

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು