Asianet Suvarna News Asianet Suvarna News

CM Meeting: ಮಳೆ ಹಾನಿ ಕುರಿತು ಸಿಎಂ ಸಭೆ, ಬೆಂಗ್ಳೂರು ಉಸ್ತುವಾರಿ ಆಕಾಂಕ್ಷಿ ಸಚಿವರೇ ಗೈರು

ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ತತ್ತರಿಸಿದೆ. ತುರ್ತು ಪರಿಹಾರ ಕಾಮಗಾರಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಶುಕ್ರವಾರ ತುರ್ತು ಸಭೆ ನಡೆಸಿದರು.

ಬೆಂಗಳೂರು, (ನ.5): ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ (Rain) ಜನಜೀವನ ತತ್ತರಿಸಿದೆ. ತುರ್ತು ಪರಿಹಾರ ಕಾಮಗಾರಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಶುಕ್ರವಾರ ತುರ್ತು ಸಭೆ ನಡೆಸಿದರು.

ಬೆಂಗಳೂರು ಉಸ್ತುವಾರಿಗಾಗಿ ಸೋಮಣ್ಣ-ಅಶೋಕ್ ಫೈಟ್: ಮಧ್ಯೆ ಪ್ರವೇಶಿದ ಸಿಎಂ

ನಗರದಲ್ಲಿ ಮಳೆಯಿಂದ ಉಂಟಾಗುತ್ತಿರುವ ಅವಾಂತರಗಳು ಮತ್ತು ಪರಿಹಾರ ಕಾಮಗಾರಿಗಳ ಕುರಿತು ಚರ್ಚಿಸಿದರು, ಆದ್ರೆ, ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಿರುವ ಇಬ್ಬರು ಸಚಿವರೇ ಗೈರಾಗಿದ್ದಾರೆ. 

Video Top Stories