
ಉಡುಪಿಯಲ್ಲಿ ಧರ್ಮ ದಂಗಲ್: ಕೋಡಿ ಜಾತ್ರೆಯಲ್ಲಿ ಮುಸ್ಲಿ ವರ್ತಕರಿಗೆ ನಿಷೇಧ
ಉಡುಪಿಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಕುಂದಾಪುರದ ಕೊಡಿ ಹಬ್ಬದಲ್ಲಿ ಮುಸ್ಲಿಮರಿಗೆ ನಿಷೇಧ ಹೇರಲಾಗಿದೆ. ಮಾರ್ಚ ತಿಂಗಳಲ್ಲಿ ಮೊದಲ ಬಾರಿ ವ್ಯಾಪಾರ ಬಹಿಷ್ಕಾರ ಹೇರಲಾಗಿತ್ತು.
ಉಡುಪಿ: ಕುಂದಾಪುರ ಕೊಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ