
Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ
* ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ
* ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
* ಮಸೀದಿಗಳಲ್ಲಿ ಮೈಕ್ ಬಳಕೆ ನಿಷೇಧಿಸುವಂತೆ ಮನವಿ
ಬೆಳಗಾವಿ(ಏ.06): ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿ ವಾರ್ ಮತ್ತೆ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಏ.11ರಿಂದ 15 ರವರೆಗೆ ವೆಂಕಟೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ರಾಮದುರ್ಗ ಪಟ್ಟಣದಲ್ಲಿರುವ ಮಸೀದಿಗಳಲ್ಲಿ ಮೈಕ್ ಬಳಕೆ ನಿಷೇಧಿಸುವಂತೆ ರಾಮದುರ್ಗ ತಹಶೀಲ್ದಾರ್ ಅವರಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Fuel Price: 2 ವಾರದಲ್ಲಿ ಪೆಟ್ರೋಲ್, ಡೀಸೆಲ್ ಭರ್ಜರಿ 9.20 ರು.ಹೆಚ್ಚಳ