Asianet Suvarna News Asianet Suvarna News

ಮೈಸೂರು ಪ್ರಕರಣದಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡ?

* ಮೈಸೂರು ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆದಂಡ?
* ಮೈಸೂರು ಪೊಲೀಸರಿಗೆ ಬಿಸಿ ಮುಟ್ಟಿಸಲು ಸರ್ಕಾರದ ನಿರ್ಧಾರ
* ಮೈಸೂರು  ಪೊಲೀಸರ ಮೇಲೆ ಜನಾಕ್ರೋಶವಿದೆ

ಬೆಂಗಳೂರು(ಆ. 27) ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಿವೆ. ಅಂಗಡಿಗೆ ನುಗ್ಗಿ ದರೋಡೆ, ಗ್ಯಾಂಗ್ ರೇಪ್ ಪ್ರಕರಣಗಳು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇದೇ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಲಿದೆ ಎನ್ನುವ ಚರ್ಚೆ ಆರಂಭವಾಗಿದೆ.

'ರೇಪ್ ಮಾಡುವಂತವರಿಗೆ ಏನ್ ಕಟ್ ಮಾಡಬಹುದೋ ಅದನ್ನು ಕಟ್ ಮಾಡಬೇಕು'

ಅಧಿಕಾರಿಗಳ ಕಾರ್ಯ ದಕ್ಷತೆ ಪ್ರಶ್ನೆ ಮಾಡುವಂತಹ ಬೆಳವಣಿಗೆ ನಡೆಯುತ್ತಿದೆ. ಇಡೀ ಪ್ರಕರಣದಿಂದ ಆಗುತ್ತಿರುವ ಮುಜುಗರ ತಪ್ಪಿಸಿಕೊಳ್ಳಲು ಸರ್ಕಾರ ಅಧಿಕಾರಿಗಳ ತಲೆದಂಡ ಮಾಡಲು ಮುಂದಾಗಿದೆ ಎನ್ನಲಾಗಿದೆ.   ಮೈಸೂರಿನ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು ಪೊಲೀಸ್ ಇಲಾಖೆ ಮೇಲೆ ಸಾಕಷ್ಟು ದೂರುಗಳು ಬರುತ್ತಿವೆ. 

Video Top Stories