Asianet Suvarna News Asianet Suvarna News

ಬಳ್ಳಾರಿ ಬಸ್‌ ನಿಲ್ದಾಣ ಖಾಲಿ ಖಾಲಿ: ಪ್ರಯಾಣಿಕರ ಪರದಾಟ

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ| ಬಳ್ಳಾರಿ- ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಸಾರಿಗೆ ಬಸ್‌ ಸಂಚಾರ ಸಂಪೂರ್ಣವಾಗಿ ಸ್ಥಗಿತ| ಬಸ್‌ಗಾಗಿ ಕಾಯುತ್ತಿರುವ ಪ್ರಯಾಣಿಕರು| 

ಬಳ್ಳಾರಿ(ಏ.07): ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಬಳ್ಳಾರಿ- ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಸಾರಿಗೆ ಬಸ್‌ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ನಿನ್ನೆ ರಾತ್ರಿಯಿಂದಲೇ ಡಿಪೋದಿಂದ ಬಸ್‌ಗಳು ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಪಡಬಾರದ ಕಷ್ಟಗಳನ್ನು ಎದುರಿಸುತ್ತಿದ್ದಾರೆ. 

ಬಸ್‌ ಬಂದ್‌: ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ವ್ಯವಸ್ಥೆ ಹೀಗಿದೆ

ಇನ್ನು ಬಳ್ಳಾರಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಆಂಧ್ರಪ್ರದೇಶಕ್ಕೆ ಹೋಗುವ ಬಸ್‌ಗಳು ಮಾತ್ರ ಕಾಣಿಸುತ್ತಿವೆ. ಕರ್ನಾಟಕದ ಬಸ್‌ಗಳು ಸೇವೆ ನಿಲ್ಲಿಸಿದ್ದರಿಂದ ಪ್ರಯಾಣಿಕರು ಬಹಳಷ್ಟು ತೊಂದರೆಗೆ ಒಳಗಾಗಿದ್ದಾರೆ. 
 

Video Top Stories