Asianet Suvarna News Asianet Suvarna News

ಲಾಕ್‌ಡೌನ್‌ ಸ್ವಲ್ಪಮಟ್ಟಿಗೆ ಸಡಿಲಿಕೆ ಮಾಡಿದ್ದೇ ತಡ ದಿನಸಿ ಖರೀದಿಗೆ ಮುಗಿಬಿಬಿದ್ದ ಜನ..!

ದಿನಸಿ ಖರೀದಿಗೆ ಮುಗಿಬಿದ್ದ ಜನರು| ಬೆಳಗಾವಿ ನಗರದ ರವಿವಾರ ಪೇಟೆಯಲ್ಲಿ ನಡೆದ ಘಟನೆ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ಮಾಡುತ್ತಿರುವ ಜನತೆ|

First Published Apr 27, 2020, 1:15 PM IST | Last Updated Apr 27, 2020, 3:24 PM IST

ಬೆಳಗಾವಿ(ಏ.27): ದಿನಸಿ ಖರೀದಿಗೆ ಜನರು ಮುಗಿಬಿದ್ದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ.     ನಗರದ ರವಿವಾರ ಪೇಟೆಯಲ್ಲಿ ವ್ಯಾಪಾರಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಆದರೆ, ಜನರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರಕ್ಕೆ ಮುಗಿಬಿದ್ದಿದ್ದಾರೆ. 

ಯೋಧನ ಮೇಲೆ ಪೊಲೀಸರ ದರ್ಪ: ಶಾಸಕರಿಗೆ ಮೃದುಧೋರಣೆ, ದೇಶ ಕಾಯುವವರಿಗೆ ಕಠಿಣ ಶಿಕ್ಷೆ!

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಅರ್ಧಶತಕ ಗಳಿಸಿ ಮುನ್ನುಗ್ಗುತ್ತಿದ್ದರೂ ಕೂಡ ಜನರಿಗೆ ಮಾತ್ರ ಕೋವಿಡ್‌ ಭಯವೇ ಇಲ್ಲದಂತಾಗಿದೆ. ಲಾಕ್‌ಡೌನ್‌ ಸ್ವಲ್ಪಮಟ್ಟಿಗೆ ಸಡಿಲಿಕೆ ಮಾಡಿದ್ದೇ ತಡ ಜನರು ಮಾರ್ಕೆಟ್‌ಗೆ ಜನರು ಮುಗಿಬೀಳುತ್ತಿದ್ದಾರೆ.