Asianet Suvarna News Asianet Suvarna News

ಮಹಾಮಾರಿ ಕೊರೋನಾಗೆ ಡೋಂಟ್‌ ಕೇರ್‌: ಮಾರ್ಕೆಟ್‌ನಲ್ಲಿ ಜನವೋ ಜನ..!

ಬಳ್ಳಾರಿಯಲ್ಲಿ ದಿನಸಿ ಖರೀದಿಗೆ ಮುಗಿಬಿದ್ದ ಜನರು| ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ| ಸಾರ್ವಜನಿಕ ಸೇವೆ, ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ಮಾಡುತ್ತಿರುವ ಜನರು|

First Published Apr 27, 2020, 1:33 PM IST | Last Updated Apr 27, 2020, 1:33 PM IST

ಬಳ್ಳಾರಿ(ಏ.27): ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರಿಂದ ದಿನಸಿ ಖರೀದಿಗೆ ಜನರು ಮಾರ್ಕೆಟ್‌ಗೆ ಇಳಿದ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಸಾರ್ವಜನಿಕ ಸೇವೆ, ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಲಾಗಿದೆ. ಆದರೆ, ಜನರು ಮಾತ್ರ ಎಂದಿನಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ಮಾಡುವಲ್ಲಿ ಜನರು ಬ್ಯೂಸಿಯಾಗಿದ್ದಾರೆ. 

ಲಾಕ್‌ಡೌನ್‌ ಸ್ವಲ್ಪಮಟ್ಟಿಗೆ ಸಡಿಲಿಕೆ ಮಾಡಿದ್ದೇ ತಡ ದಿನಸಿ ಖರೀದಿಗೆ ಮುಬಿಬಿದ್ದ ಜನ..!

ಮನೆ ಬಿಟ್ಟು ಹೊರಗಡೆ ಬರುತ್ತಿರುವ ಜನರು ಮಾಸ್ಕ್‌ ಧರಿಸುತ್ತಿಲ್ಲ. ಇದು ನಿಜಕ್ಕೂ ಆತಂಕಕ್ಕಾರಿಯಾದ ವಿಷಯವಾಗಿದೆ. ಮೊದಲೇ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ ಕೂಡ ಜನರು ಮಾತ್ರ ಮಹಾಮಾರಿ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.