ಹಣ ಸಂಗ್ರಹಿಸಿಟ್ಟಿರುವ ಆರೋಪ: ಬಿಜೆಪಿ ನಾಯಕರು ಮಲಗಿದ್ದ ರೂಮ್ ಮೇಲೆ ದಾಳಿ..!
ಹಣ ಸಂಗ್ರಹಿಸಿಟ್ಟಿರುವ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಮಲಗಿದ್ದ ಹೋಟೆಲ್ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ.
ಹಣ ಸಂಗ್ರಹಿಸಿಟ್ಟಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಲಾಡ್ಜ್ನಲ್ಲಿ ತಂಗಿದ್ದ ಬಿಜೆಪಿ ನಾಯಕರ ರೂಂ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚಲು ಬಿಜೆಪಿ ನಾಯಕರು ಹಣ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿತ್ತು.