
ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ
* 20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರು
* ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಅಪರೂಪದ ಘಟನೆ
* ನಿವೃತ್ತಿಯ ನಂತರ ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದ ಮೂವರು 'ಸೈನಿಕ' ಸ್ನೇಹಿತರು
ಕಲಬುರಗಿ(ಆ.19): 20 ವರ್ಷಗಳ ಕಾಲ ಸೇನೆಯಲ್ಲಿ ದೇಶ ಸೇವೆಗೈದು ನಿವೃತ್ತಿರಾದ ಯೋಧರಿಗೆ ಗ್ರ್ಯಾಂಡ್ ವೆಲ್ಕಂ ಸಿಕ್ಕಿದೆ. ಹೌದು, ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ಜನರು ತೆರೆದ ವಾಹನದಲ್ಲಿ ಮೆರವಣಿಗೆ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ನಿವೃತ್ತಿಯಾದ ಯೋಧರನ್ನ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸನಿವೃತ್ತಿಯ ನಂತರ ಮೊದಲ ಬಾರಿಗೆ ಮೂವರು 'ಸೈನಿಕ' ಸ್ನೇಹಿತರು ಹುಟ್ಟೂರಿಗೆ ಆಗಮಿಸಿದ್ದಾರೆ. ಮರತೂರ ಗ್ರಾಮದ ಶರಣಪ್ಪ ದುಗ್ಗೊಂಡ, ಜಗದೀಶ್ ಠಾಕೂರ್ ಮತ್ತು ಶಿವಾನಂದ ಧರ್ಮಾಪುರ ಎಂಬುವರೇ ನಿವೃತ್ತ ಯೋಧರಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!