ಹುಬ್ಬಳ್ಳಿ ಏರ್ಪೋರ್ಟ್ಗೆ ರಾಯಣ್ಣನ ಹೆಸರಿಡಲು ಆಗ್ರಹ: ಡೊಳ್ಳು ಬಾರಿಸಿ ಪ್ರತಿಭಟನೆ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಆಗ್ರಹಿಸಿ ಪ್ರತಿಭಟನೆ| ಧಾರವಾಡದ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ| ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಡೊಳ್ಳು ಬಾರಿಸುವ ಮೂಲಕ ವಿನೂತನ ಪ್ರತಿಭಟನೆ|
ಧಾರವಾಡ(ಜ.24): ಹುಬ್ಬಳ್ಳಿಯಲ್ಲಿರುವ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಡೊಳ್ಳು ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬ್ರಿಟಿಷರ ವಿರುದ್ಧ ಹೋರಾಡಿದ್ದ ಸಂಗೊಳ್ಳಿ ರಾಯಣ್ಣನ ಹೆಸರಿಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ರಾಯಣ್ಣನ ಅಭಿಮಾನಿಗಳು ಪಾಲ್ಗೊಂಡಿದ್ದರು.