ಮೋದಿ ಭರವಸೆ ಹುಸಿ, ನಾವು ಹಕ್ಕುಪತ್ರ ಕೊಡ್ತೇವೆ: CM Siddaramaiah Karnataka Saadhana Samavesha Kannada News

Share this Video
  • FB
  • Linkdin
  • Whatsapp

ಬಿಜೆಪಿಯವರಿಗೆ ಮೂಲಭೂತ ಆರ್ಥಿಕತೆಯ ಜ್ಞಾನವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ತಮ್ಮ ಸರ್ಕಾರ 5000 ಕೋಟಿ ರೂ. ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿದ 3000 ಕೋಟಿ ರೂ. ಬಿಡುಗಡೆ ಮಾಡಿಲ್ಲ ಮತ್ತು ಕೇಂದ್ರದಿಂದಲೂ ಈ ಭಾಗಕ್ಕೆ ಯಾವುದೇ ನೆರವು ಬಂದಿಲ್ಲ ಎಂದು ಆರೋಪಿಸಿದ್ದಾರೆ. ಮುಂಬರುವ 'ಸಾಧನಾ ಸಮಾವೇಶ'ದಲ್ಲಿ ಲಕ್ಷಾಂತರ ಜನರಿಗೆ ಹಕ್ಕುಪತ್ರ ವಿತರಣೆ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಹಾಗೂ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಭರವಸೆ ನೀಡಿದ್ದು, ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ನಾಯಕರನ್ನೂ ಆಹ್ವಾನಿಸಿರುವುದಾಗಿ ತಿಳಿಸಿದ್ದಾರೆ. ನಾಗೇಂದ್ರ ಅವರನ್ನು ಸಚಿವರನ್ನಾಗಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದು, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ದನಿಗೂಡಿಸಿದ್ದಾರೆ.Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video