Asianet Suvarna News Asianet Suvarna News

ಆರೋಗ್ಯ ಸಚಿವರದ್ದು ಹೇಳೋದು ಆಚಾರ, ತಿನ್ನೋದು ಬದನೆಕಾಯಿ...!

'ಹೇಳೋದು ಆಚಾರ, ತಿನ್ನೋದು ಬದನೆಕಾಯಿ' ಗಾದೆಯಂತೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ನಿಯಮ ಉಲ್ಲಂಘನೆ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಚಿತ್ರದುರ್ಗ, (ಜೂನ್. 02): 'ಹೇಳೋದು ಆಚಾರ, ತಿನ್ನೋದು ಬದನೆಕಾಯಿ' ಗಾದೆಯಂತೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ನಿಯಮ ಉಲ್ಲಂಘನೆ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕರ್ನಾಟಕದಲ್ಲಿ ದಿನೇ ದಿನೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಮಾಹಾಮಾರಿಯನ್ನು ನಿಯಂತ್ರಣ ಮಾಡಲು ಎಷ್ಟೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. 

ಆದರೆ ಈ ನಡುವೆ ರಾಜ್ಯದ ಈ ಪರಿಸ್ಥಿತಿಯ ಅರಿವಿರುವ ಆರೋಗ್ಯ ಸಚಿವರೇ ಸಾವಿರಾರು ಜನರಿಂದ ಅದ್ದೂರಿ ಸ್ವಾಗತ ತೆಗೆದುಕೊಂಡಿದ್ದಾರೆ. ಅಲ್ಲದೇ ಸಾಲದಕ್ಕೆ  ಹಾರ ತುರಾಯಿ ಬೇರೆ..