Asianet Suvarna News Asianet Suvarna News

ಬಸವನ ಬಾಗೇವಾಡಿ: ಸ್ವಗ್ರಾಮಕ್ಕೆ ಆಗಮಿಸಿದ ಯೋಧನ ಪಾರ್ಥಿವ ಶರೀರ

* ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ
* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ
* ಮೃತ ಯೋಧನ ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ
 

ವಿಜಯಪುರ(ಜು.04): ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಕಾಳಗದಲ್ಲಿ ವೀರಮರಣ ಹೊಂದಿದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ ಪಾರ್ಥಿವ ಶರೀರ ಇಂದು(ಭಾನುವಾರ) ಸ್ವಗ್ರಾಮಕ್ಕೆ ತಲುಪಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಕಾಶಿರಾಯನ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 

ಪುಲ್ವಾಮಾ ಉಗ್ರ ದಾಳಿಯಲ್ಲಿ ರಾಜ್ಯದ ಯೋಧ ಹುತಾತ್ಮ