Asianet Suvarna News Asianet Suvarna News

SSLC ಪರೀಕ್ಷೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌ ಎಂದ ವಿದ್ಯಾರ್ಥಿಗಳು..!

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ| ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ನಿಂತ ವಿದ್ಯಾರ್ಥಿಗಳು|  ಪರೀಕ್ಷಾ ಕೇಂದ್ರ ಆವರಣದಲ್ಲಿ ಹಾಲ್‌ಟಿಕೆಟ್‌ ನಂಬರ್‌ ನೋಡಲು ಮುಗಿಬಿದ್ದ ವಿದ್ಯಾರ್ಥಿಗಳು|

ವಿಜಯಪುರ(ಜೂ.25): ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಆದರೆ, ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ನಿಂತಿರುವ ಘಟನೆ ನಗರದಲ್ಲಿ ಇಂದು(ಗುರುವಾರ) ನಡೆದಿದೆ. ಪದೇ ಪದೆ ಎಚ್ಚರಿಸಿದ್ರೂ ಕೂಡ ವಿದ್ಯಾರ್ಥಿಗಳು ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌ ಅಂದಿದ್ದಾರೆ. 

ಮತ್ತೆ ಲಾಕ್‌ಡೌನ್: ರಾಜ್ಯ ಸರ್ಕಾರದ ಮುಂದಿರುವ 5 ಪ್ಲಾನ್‌ಗಳು....!

ಪರೀಕ್ಷಾ ಕೇಂದ್ರ ಆವರಣದಲ್ಲಿ ಹಾಲ್‌ಟಿಕೆಟ್‌ ನಂಬರ್‌ ನೋಡಲು ವಿದ್ಯಾರ್ಥಿಗಳು ಗುಂಪು ಗುಂಪಾಗಿ ನಿಲ್ಲುವ ಮೂಲಕ ಸರ್ಕಾರದ ಆದೇಶಗಳನ್ನ ಉಲ್ಲಂಘಿಸಿದ್ದಾರೆ.  ಇವರಲ್ಲಿ ಒಬ್ಬ ವಿದ್ಯಾರ್ಥಿಗೆ ಮಹಾಮಾರಿ ಕೊರೋನಾ ವೈರಸ್‌ ಇದ್ದರೆ ಯಾರು ಇದಕ್ಕೆ ಹೊಣೆ ಎಂದು ಸಾರ್ವಜನಿಕರ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.