Asianet Suvarna News Asianet Suvarna News

ಸಿ ಎಂ ಬೊಮ್ಮಾಯಿ ತವರೂರಲ್ಲೇ ಅಸ್ಪೃಶ್ಯತೆ; ದೇವಸ್ಥಾನ ಪ್ರವೇಶಿಸಿದ ತಾಯಿ, ಮಗನ ಮೇಲೆ ಹಲ್ಲೆ

ಹಾವೇರಿಯಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆಬಂದಿದ್ದು,ದೇವಸ್ಥಾನ ಪ್ರವೇಶಿಸಿದ್ದ ದಲಿತ ಮಹಿಳೆ ಮತ್ತು ಆಕೆಯ ಮಗನ ಮೇಲೆ ಸವರ್ಣೀಯರು ಹಲ್ಲೆ ಮಾಡಿದ್ದಾರೆ.

ಸಿ ಎಂ ಬೊಮ್ಮಾಯಿ ತವರು ಜಿಲ್ಲೆಯಲ್ಲೇ  ಅಸ್ಪೃಶ್ಯತೆ ಜೀವಂತವಾಗಿದ್ದು, ದೇವಸ್ಥಾನ ಪ್ರವೇಶಿಸಿದ್ದ ದಲಿತ ಮಹಿಳೆ ಮತ್ತು ಮಗನ ಮೇಲೆ ಸವರ್ಣೀಯರು ಹಲ್ಲೆಮಾಡಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ನಡೆದಿದೆ. ನಂದಿಹಳ್ಳಿಯ ಬಸವೇಶ್ವರ ದೇಗುಲಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಆದರೆ ಇದನ್ನು ಲೆಕ್ಕಿಸದೆ ಮಹಿಳೆ ತನ್ನ ಮಗನೊಂದಿಗೆ ಬಸವೇಶ್ವರನ ದರ್ಶನಕ್ಕೆ ದೇಗುಲದ ಒಳ ಪ್ರವೇಶ ಮಾಡಿದ್ದಾರೆ. ಹೆಮ್ಮವ್ವ ಮತ್ತು ಇವರ ಮಗ ರಮೇಶ್ ಜಾತ್ರಾ ಮಹೋತ್ಸವದ ಪ್ರಯುಕ್ತ ನಂದಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದಾರೆ ಇದರಿಂದ ಆಕ್ರೋಶಗೊಂಡ ಸವರ್ಣೀಯರು, ಗುಂಪುಕಟ್ಟಿಕೊಂಡು ದೇಗುಲ ಪ್ರವೇಶಿಸಿದವರ ಮನೆ ಮೇಲೆ ದಾಳಿ ಮಾಡಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೋವಿಡ್‌ ಬಳಿಕ H3N2 ವೈರಸ್‌ ಭೀತಿ:ಕರ್ನಾಟಕದಲ್ಲಿಯೂ ಮಹಾಮಾರಿ ಆತಂಕ

Video Top Stories