Ankola: ಉರೂಸ್‌ನಲ್ಲಿ ಜಾತಿ, ಧರ್ಮ ಭೇದ ಮರೆತು ಸೇರಿದ ಸಾವಿರಾರು ಜನ

*  ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರೂಸ್ 
*  ಮುಸ್ಲಿಮರೊಂದಿಗೆ ಹರಕೆಯ ಚಾದರ್‌ಗಳನ್ನು ಅರ್ಪಿಸಿದ ಹಿಂದೂಗಳು
*  ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಭಕ್ತರು
 

Share this Video
  • FB
  • Linkdin
  • Whatsapp

ಅಂಕೋಲಾ(ಫೆ.19): ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಪಕ್ಕದಲ್ಲಿರುವ ಸೈಯ್ಯದ್ ಹಸನ್ ಶಾ‌ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ‌ ಕಾಲ ನಡೆದ ಉರುಸ್ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ನೆರವೇರಿದೆ.‌ ದರ್ಗಾದಲ್ಲಿ ನಡೆದ ಉರೂಸ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಇದರಲ್ಲಿ ಕೇವಲ ಮುಸ್ಲಿಮರಷ್ಟೇ ಅಲ್ಲದೇ, ಹಿಂದೂಗಳೂ ಕೂಡಾ ಸೇರಿಕೊಂಡದ್ದು ವಿಶೇಷವಾಗಿತ್ತು. 

Add Asianetnews Kannada as a Preferred SourcegooglePreferred

ದರ್ಗಾದಲ್ಲಿ ಮುಸ್ಲಿಮರೊಂದಿಗೆ ಹಿಂದೂಗಳೂ ಕೂಡ ಹರಕೆಯಾಗಿ ಚಾದರ್‌ಗಳನ್ನು ಹೊದಿಸಿದರು. ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲೂ ಜಾತಿ, ಧರ್ಮ ಭೇದ ಮರೆತು ಸಾವಿರಾರು ಜನ ಪಾಲ್ಗೊಂಡು ಭಾವೈಕ್ಯತೆ ಮೆರೆದಿದ್ದಾರೆ. 

Hijab Row: ಹಿಜಾಬ್ ತೆಗೆದು ಕ್ಲಾಸ್‌ಗೆ ಹೋಗಿ, ಶಾಂತಿ ಮಂತ್ರ ಜಪಿಸಿದ ಅಂಜುಮನ್ ಸಂಸ್ಥೆ

ಇನ್ನು ಉರುಸ್ ಅಂಗವಾಗಿ ಅಂಕೋಲಾ ಪಟ್ಟಣದಲ್ಲಿ ಮುಸ್ಲಿಮರಿಂದ ಮೆರವಣಿಗೆ ನಡೆಯಿತು. ಈ ವೇಳೆ ಹಿಂದೂಗಳು ಕೂಡ ಮೆರವಣಿಗೆ ವೇಳೆ ಕೈಮುಗಿದು ಪ್ರಾರ್ಥಿಸಿದರು. ದರ್ಗಾದಲ್ಲಿ ಅಗರಬತ್ತಿ ಹಚ್ಚಿ, ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಹಿಂದೂ- ಮುಸ್ಲಿಂ ಎಂಬ ಭೇದ ಭಾವ ಸೃಷ್ಟಿಯಾಗಿರುವ ಇತ್ತೀಚಿನ ದಿನಗಳಲ್ಲಿ ಅಂಕೋಲಾದಲ್ಲಿ ನಡೆದ ಈ ಉರೂಸ್ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯ ಮಾಡಿರುವುದು ಮಾದರಿಯೇ ಸರಿ.

Related Video