Asianet Suvarna News Asianet Suvarna News

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಹೈಮಾಸ್ಟ್‌ ಲೈಟ್‌ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳ ಮೀನಾಮೇಷ| ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ| ಹೊಸ ಲೈಟ್‌ ಅಳವಡಿಸಲು ಸಿದ್ಧತೆ| 

ಕೊಡಗು(ಫೆ.10): ಸಾರ್ವಜನಿಕರಿಗೆ ಉಪಯೋಗವಾಗಲಿ ಅಂತ ಜಿಲ್ಲೆಯ ವಿರಾಜಪೇಟೆ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಲಾಗಿತ್ತು. ಆದರೆ, ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕೂಡ ಕಳೆದ ಕೆಲವು ದಿನಗಳಿಂದ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದರು. 

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗಿದ್ದೇ ತಡ 10 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಕೇವಲ 10 ದಿನದಲ್ಲೇ ಮುಕ್ತಿ ಸಿಕ್ಕಿದೆ. ಇದೀಗ ಈ ಜಾಗದಲ್ಲಿ ಹೊಸ ಲೈಟ್‌ ಅಳವಡಿಸಲು ಸಿದ್ಧತೆ ನಡೆಯುತ್ತಿದೆ.