
Vokkaliga: ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಪಟ್ಟು: ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಸಭೆ
ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿಯಾಗಿದ್ದರು.
ಒಕ್ಕಲಿಗ ಸಮುದಾಯದಿಂದ ಮೀಸಲಾತಿ ಹೆಚ್ಚಳಕ್ಕೆ ತೀವ್ರ ಹೋರಾಟಕ್ಕೆ ಸಿದ್ಧತೆ ನಡೆದಿದೆ. ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಭಾಗಿಯಾಗಿದ್ದು, ಕಾನೂನಾತ್ಮಕವಾಗಿ ಹೋರಾಟಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದಾರೆ. ಬೇರೆ ಸಮುದಾಯದಂತೆ ನಾವು ಎಚ್ಚರಿಕೆ ಕೊಡುವುದಿಲ್ಲ. ಜನಸಂಖ್ಯೆ ಆಧಾರದಲ್ಲಿ ಶೇ.12ರಷ್ಟು ಮೀಸಲಾತಿ ಕೇಳಿದ್ದೇವೆ, ಶಾಂತ ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಸಭೆ ಬಳಿಕ ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.
Add Asianetnews Kannada as a Preferred Source
