Asianet Suvarna News Asianet Suvarna News

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ವೇಳೆ ಕೆ ಎಸ್ ಈಶ್ವರಪ್ಪ ಭಾಷಣ ಹೀಗಿತ್ತು!

*ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
*ಉಡುಪಿ ಲಾಡ್ಜ್‌ನಲ್ಲಿ ಸಾವಿಗೆ ಶರಣು: ರಾಜಕೀಯ ವಿವಾದ ಸ್ಫೋಟ
*ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ವೇಳೆ ಈಶ್ವರಪ್ಪ ಹೇಳಿದ್ದೇನು?

First Published Apr 13, 2022, 11:31 AM IST | Last Updated Apr 13, 2022, 11:31 AM IST

ಬೆಂಗಳೂರು (ಏ. 13): ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ, ಹಿಜಾಬ್‌-ಹಲಾಲ್‌ ಸೇರಿದಂತೆ ಅನೇಕ ರೀತಿಯ ಕೋಮು ವಿವಾದಗಳನ್ನು ನಿರ್ವಹಿಸಬೇಕಾದ ಇಕ್ಕಟ್ಟಿನಲ್ಲಿದ್ದ ಸರ್ಕಾರವನ್ನು ‘ಆತ್ಮಹತ್ಯೆ ಪ್ರಕರಣ’ ತೀವ್ರ ಮುಜುಗರಕ್ಕೆ ಸಿಲುಕಿಸಿದೆ.

ಇದನ್ನೂ ಓದಿ: 

ಇದೇ ವೇಳೆ, ಪ್ರತಿಪಕ್ಷ ಕಾಂಗ್ರೆಸ್‌ಗೆ ಸರ್ಕಾರವನ್ನು ಹಣಿಯಲು ಪ್ರಬಲ ವಿಷಯವೊಂದು ದೊರೆತಂತಾಗಿದ್ದು, ಸಚಿವರ ತಲೆದಂಡಕ್ಕೆ ಆಗ್ರಹಿಸಿ ಉಗ್ರ ಹೋರಾಟಕ್ಕೆ ಮುಂದಾಗಿದೆ. ಅಲ್ಲದೆ, ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವ ಜೊತೆಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಲು ನಿರ್ಧರಿಸಿದೆ. ಈ ನುಡವೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂದರ್ಭದಲ್ಲಿ ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಈ ಕುರಿತ ಒಂದು ವರದಿ

Video Top Stories