
Amit Shah: ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸದಾ ಸಿದ್ಧ: ಅಮಿತ್ ಶಾ
ಸಹಕಾರಿಗಳಿಗೆ ಹಾಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಸ್ವಾತಂತ್ರ್ಯ ಭಾರತದಲ್ಲಿ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಬೇಕೆಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಈ ಬೇಡಿಕೆ ಅಂದೇ ಈಡೇರಿದ್ದರೆ ಪರಿಸ್ಥಿತಿಯೇ ಬೇರೆ ಇರುತ್ತಿತ್ತು. ಭಾರತದ ರೈತರ ಇಂದಿನ ಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅಮಿತ್ ಶಾ ಹೇಳಿದರು. ಗೆಜ್ಜಲೆಗೆರೆಯಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಮೆಗಾ ಡೈರಿ ಉದ್ಘಾಟನೆ ಆಗಿದೆ. 260 ಕೋಟಿ ರೂ. ವೆಚ್ಚದಲ್ಲಿ ಮಿಲ್ಕ್ ಫ್ಲಾಂಟ್ ನಿರ್ಮಾಣ ಆಗಿದೆ ಎಂದರು. ಸಹಕಾರ ಕ್ಷೇತ್ರದ ಸದಸ್ಯರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ತಿಳಿಸಿದರು.
Add Asianetnews Kannada as a Preferred Source

ನಮ್ಮ ಹೋರಾಟಕ್ಕೆ ಹೆದರಿ ಕಳಸಾಗೆ ಒಪ್ಪಿಗೆ: ಕಾಂಗ್ರೆಸ್ ನಾಯಕ ಸುರ್ಜೇವ ...