
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಹಿಂದಿದ್ಯಾ 'ಕೇರಳ ಸ್ಟೋರಿ' ಕಥೆ?: ಕೇಸ್ನ ಸಮಗ್ರ ತನಿಖೆಗೆ ಮಹಿಳಾ ಸಂಘಟನೆ ಒತ್ತಾಯ
ಸೋಮೇಶ್ವರ ಬೀಚ್ ಬಳಿ ನೈತಿಕ ಪೊಲೀಸ್ ಗಿರಿ
ಈ ಪ್ರಕರಣದ ಹಿಂದಿದ್ಯಾ ಕೇರಳ ಸ್ಟೋರಿ ಕಥೆ?
ತನಿಖೆ ನಡೆಸುವಂತೆ ಮಹಿಳಾ ಸಂಘಟನೆ ಒತ್ತಾಯ
ಮಂಗಳೂರು: ಸೋಮೇಶ್ವರ ಬೀಚ್ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಚರ್ಚೆ ಶುರುವಾಗಿದ್ದು, ಇದರ ಹಿಂದೆ ಕೇರಳ ಸ್ಟೋರಿ ಕಥೆ ಇದೆಯಾ ಎಂಬ ಅನುಮಾನ ಮೂಡಿದೆ. ಯುವತಿಯರ ಪೋಷಕರನ್ನು ಠಾಣೆಗೆ ಕರೆಸುವಂತೆ ಮಹಿಳೆಯರು ಪಟ್ಟು ಹಿಡಿದ್ದಾರೆ. ಈ ಪ್ರಕರಣದ ಸಮಗ್ರ ತನಿಖೆಗೆ ಮಹಿಳಾ ಸಂಘಟನೆ ಒತ್ತಾಯಿಸಿದೆ. ಅಲ್ಲದೇ ವಿದ್ಯಾರ್ಥಿನಿಯರನ್ನು ಪೊಲೀಸ್ ಠಾಣೆಗೆ ಕರೆಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಯುವತಿಯರನ್ನು ಕರೆಸದಿದ್ದರೇ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಎರಡೂ ಕಡೆಯಿಂದ ತನಿಖೆ ನಡೆಯಬೇಕು ಎಂಬುದು ಮಹಿಳೆಯರ ಆಗ್ರಹವಾಗಿದೆ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: ದೇಶ ಕಂಡ ದಶಮಾನದ ಮಹಾದುರಂತ: ಏನಿದು ಕವಚ ತಂತ್ರಜ್ಞಾನ?.. ಬಾಲಸೋರ್ ಅಪಘಾತ ಏಕೆ ತಪ್ಪಲಿಲ್ಲ ?