Asianet Suvarna News Asianet Suvarna News

Karnataka Bandh: ಸ್ಯಾಂಡಲ್‌ವುಡ್‌ನಿಂದ ನೈತಿಕ ಬೆಂಬಲ ಬೇಡ, ನೀವು ಕನ್ನಡಿಗರಲ್ವೇನ್ರಿ.? ಸಾರಾ ಗೋವಿಂದು

ಎಂಇಎಸ್ ದುಂಡಾವರ್ತನೆ ಖಂಡಿಸಿ, ಎಂಇಎಸ್‌ನ್ನು (MES) ನಿಷೇಧಿಸಬೇಕೆಂದು ಆಗ್ರಹಿಸಿ ಇದೇ ಡಿ. 31 ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 
 

First Published Dec 24, 2021, 5:55 PM IST | Last Updated Dec 24, 2021, 5:55 PM IST

ಬೆಂಗಳೂರು (ಡಿ. 24): ಎಂಇಎಸ್ ದುಂಡಾವರ್ತನೆ ಖಂಡಿಸಿ, ಎಂಇಎಸ್‌ನ್ನು (MES) ನಿಷೇಧಿಸಬೇಕೆಂದು ಆಗ್ರಹಿಸಿ ಇದೇ ಡಿ. 31 ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. 

'ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಫಿಲ್ಮ್‌ ಛೇಂಬರ್‌ನಲ್ಲಿಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಎಂದಿನಂತೆ ನಡೆಯುತ್ತದೆ. ಚಿತ್ರೀಕರಣ ಸ್ಥಗಿತ ಇಲ್ಲ. ಕನ್ನಡದ ಪರವಾಗಿ ನಮ್ಮ ಬೆಂಬಲ ಸದಾ ಇರುತ್ತೆ' ಎಂದು ಫಿಲ್ಮ್ ಚೇಂಬರ್ ಉಪಾಧ್ಯಕ್ಷ ಉಮೇಶ್ ಬಣಕಾರ್ ಹೇಳಿದರು.

karnataka Bandh: ಸ್ಯಾಂಡಲ್‌ವುಡ್‌ನಿಂದ ನೈತಿಕ ಬೆಂಬಲ, ಲವ್ ಯೂ ರಚ್ಚು, ಅರ್ಜುನ್ ಗೌಡ ಸಿನಿಮಾ ರಿಲೀಸ್  

'ನೈತಿಕ ಬೆಂಬಲ ಬೇಡ. ಬಂದ್‌ನಲ್ಲಿ ಭಾಗವಹಿಸಬೇಕು. ಎಷ್ಟು ದಿನ ದಬ್ಬಾಳಿಕೆ ಸಹಿಸಿಕೊಂಡು ನಾವಿರಬೇಕು.?  ನೀವು ಕನ್ನಡಿಗರಲ್ವಾ..? ಬನ್ನಿ, ಬಂದ್ ಯಶಸ್ವಿಗೊಳಿಸಬೇಕು'' ಎಂದು ಸ್ಯಾಂಡ್‌ವುಡ್ ಕಲಾವಿದರಿಗೆ ಸಾರಾ ಗೋವಿಂದು ಕರೆ ನೀಡಿದ್ದಾರೆ.