ಉತ್ಸಾಹ ತಗ್ಗಿಸದು ಪ್ರವಾಹ: ಕರುನಾಡಿನಲ್ಲಿ ಸ್ವಾತಂತ್ರ್ಯ ದಿನಾಚರಣೆ!
ಭೀಕರ ಪ್ರವಾಹದಿಂದ ನಲುಗಿರುವ ಕರ್ನಾಟಕದಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ತನ್ನ ಹೊಳಪನ್ನು ಕಳೆದುಕೊಳ್ಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ಎಣಿಕೆಯನ್ನು ಸುಳ್ಳು ಮಾಡಿದ ಕರುನಾಡು, ಮೊದಲಿಗಿಂತ ಹೆಚ್ಚಿನ ಉತ್ಸಾಹದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ.
ಬೆಂಗಳೂರು(ಆ.15): ಭೀಕರ ಪ್ರವಾಹದಿಂದ ನಲುಗಿರುವ ಕರ್ನಾಟಕದಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ತನ್ನ ಹೊಳಪನ್ನು ಕಳೆದುಕೊಳ್ಳಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ಎಣಿಕೆಯನ್ನು ಸುಳ್ಳು ಮಾಡಿದ ಕರುನಾಡು, ಮೊದಲಿಗಿಂತ ಹೆಚ್ಚಿನ ಉತ್ಸಾಹದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಅದರಲ್ಲೂ ವಿಶೇಷವಾಗಿ ಪ್ರವಾಹದಿಂದ ನಲುಗಿರುವ ರಾಜ್ಯದ ಉತ್ತರ ಭಾಗದಲ್ಲಿ ಅತ್ಯಂತ ಉತ್ಸಾಹದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಷ್ಟೇ ಅಲ್ಲದೇ ರಾಜ್ಯದ ಮೂಲೆ ಮೂಲೆಯಲ್ಲೂ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಿ ದೇಶಪ್ರೇಮವನ್ನು ಸಾರಲಾಯ್ತು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....